24.6 C
ಪುತ್ತೂರು, ಬೆಳ್ತಂಗಡಿ
June 21, 2026
ಜಿಲ್ಲಾ ಸುದ್ದಿ

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ಅಸ್ತಮ ಮತ್ತು ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ತೊಂದರೆಗಳನ್ನು ನಿಯಂತ್ರಿಸಲು ನ .10ರಂದು ಉಡುಪಿಯ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರವರು ಉದ್ಘಾಟಿಸಿ, ಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಯವರಾದ ಪಿ.ರವಿಶಂಕರ್‌ರವರು ಅಧ್ಯಕ್ಷತೆಯನ್ನು ವಹಿಸಿ, ಸುವರ್ಣ ಕರ್ನಾಟಕ ಸಂಭ್ರಮ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕೆ.ಎಸ್‌.ಆರ್‌.ಟಿ.ಸಿ ಘಟಕ ವ್ಯವಸ್ಥಾಪಕರಾದ ಶಿವರಾಮ್ ನಾಯಕ್‌, ಕರಾವಳಿ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಸಾರಥ್ಯ ಸೇವಾ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಮತ್ತಿತರರು ಉಪಸ್ಥಿತರಿದ್ದರು. ಪ್ರಸ್ತಾವನೆಯನ್ನು ಅಧೀಕ್ಷಕರಾದ ಪಮಿತರವರು ನೆರವೇರಿಸಿದರು. ಕಾರ್ಯಕ್ರಮವನ್ನು ಮೋಟಾರು ವಾಹನದ ಹಿರಿಯ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ನಿರೂಪಿಸಿದರು. ಆರ್‌ಟಿಒ ಸಿಬ್ಬಂದಿಯವರಾದ ಶಾಂತರಾಜುರವರು ಸ್ವಾಗತಿಸಿ, ಅಧೀಕ್ಷರಾದ ಸರಸ್ವತಿಯವರು ವಂದನಾರ್ಪಣೆ ಗೈದರು.

Related posts

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya
error: Content is protected !!