25.1 C
ಪುತ್ತೂರು, ಬೆಳ್ತಂಗಡಿ
August 5, 2026
ಜಿಲ್ಲಾ ಸುದ್ದಿ

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ಅಸ್ತಮ ಮತ್ತು ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ತೊಂದರೆಗಳನ್ನು ನಿಯಂತ್ರಿಸಲು ನ .10ರಂದು ಉಡುಪಿಯ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರವರು ಉದ್ಘಾಟಿಸಿ, ಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಯವರಾದ ಪಿ.ರವಿಶಂಕರ್‌ರವರು ಅಧ್ಯಕ್ಷತೆಯನ್ನು ವಹಿಸಿ, ಸುವರ್ಣ ಕರ್ನಾಟಕ ಸಂಭ್ರಮ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕೆ.ಎಸ್‌.ಆರ್‌.ಟಿ.ಸಿ ಘಟಕ ವ್ಯವಸ್ಥಾಪಕರಾದ ಶಿವರಾಮ್ ನಾಯಕ್‌, ಕರಾವಳಿ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಸಾರಥ್ಯ ಸೇವಾ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಮತ್ತಿತರರು ಉಪಸ್ಥಿತರಿದ್ದರು. ಪ್ರಸ್ತಾವನೆಯನ್ನು ಅಧೀಕ್ಷಕರಾದ ಪಮಿತರವರು ನೆರವೇರಿಸಿದರು. ಕಾರ್ಯಕ್ರಮವನ್ನು ಮೋಟಾರು ವಾಹನದ ಹಿರಿಯ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ನಿರೂಪಿಸಿದರು. ಆರ್‌ಟಿಒ ಸಿಬ್ಬಂದಿಯವರಾದ ಶಾಂತರಾಜುರವರು ಸ್ವಾಗತಿಸಿ, ಅಧೀಕ್ಷರಾದ ಸರಸ್ವತಿಯವರು ವಂದನಾರ್ಪಣೆ ಗೈದರು.

Related posts

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!