26.5 C
ಪುತ್ತೂರು, ಬೆಳ್ತಂಗಡಿ
September 20, 2026
ಜಿಲ್ಲಾ ಸುದ್ದಿ

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ಅಸ್ತಮ ಮತ್ತು ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ತೊಂದರೆಗಳನ್ನು ನಿಯಂತ್ರಿಸಲು ನ .10ರಂದು ಉಡುಪಿಯ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರವರು ಉದ್ಘಾಟಿಸಿ, ಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಯವರಾದ ಪಿ.ರವಿಶಂಕರ್‌ರವರು ಅಧ್ಯಕ್ಷತೆಯನ್ನು ವಹಿಸಿ, ಸುವರ್ಣ ಕರ್ನಾಟಕ ಸಂಭ್ರಮ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕೆ.ಎಸ್‌.ಆರ್‌.ಟಿ.ಸಿ ಘಟಕ ವ್ಯವಸ್ಥಾಪಕರಾದ ಶಿವರಾಮ್ ನಾಯಕ್‌, ಕರಾವಳಿ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಸಾರಥ್ಯ ಸೇವಾ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಮತ್ತಿತರರು ಉಪಸ್ಥಿತರಿದ್ದರು. ಪ್ರಸ್ತಾವನೆಯನ್ನು ಅಧೀಕ್ಷಕರಾದ ಪಮಿತರವರು ನೆರವೇರಿಸಿದರು. ಕಾರ್ಯಕ್ರಮವನ್ನು ಮೋಟಾರು ವಾಹನದ ಹಿರಿಯ ನಿರೀಕ್ಷಕರಾದ ಸಂತೋಷ್ ಶೆಟ್ಟಿಯವರು ನಿರೂಪಿಸಿದರು. ಆರ್‌ಟಿಒ ಸಿಬ್ಬಂದಿಯವರಾದ ಶಾಂತರಾಜುರವರು ಸ್ವಾಗತಿಸಿ, ಅಧೀಕ್ಷರಾದ ಸರಸ್ವತಿಯವರು ವಂದನಾರ್ಪಣೆ ಗೈದರು.

Related posts

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ಮುಂದುವರಿದ ಧಾರಾಕಾರ ಮಳೆಜು: 20ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya
error: Content is protected !!