23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!