July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ

Suddi Udaya

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya
error: Content is protected !!