23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya
error: Content is protected !!