25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!