April 2, 2025
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya
error: Content is protected !!