22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!