29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!