ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನೀಟ್ ಎಂದರೆ ಎಕ್ಸೆಲ್; ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನ – ನಿರಂತರ ಸಾಧನೆಗೆ ಸುಮಂತ್ ಕುಮಾರ್ ಜೈನ್ ಹರ್ಷ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya
error: Content is protected !!