23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya
error: Content is protected !!