25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya
error: Content is protected !!