22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!