ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!