23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!