July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!