ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಗುರುವಾಯನಕೆರೆ : ಗುರುವಾಯನಕೆರೆ ದರ್ಗಾ ಬಳಿ ಮಹಿಳೆ ಮತ್ತು ಆಕೆಯ ಪತಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ,ಕಾರಿನಲ್ಲಿ ಬಂದ ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಪತಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುವ ಘಟನೆ ನ.11 ರಂದು ವರದಿಯಾಗಿದೆ.

ನ .11ರಂದು ಮಹಿಳೆಯು ತನ್ನ ಪತಿಯೊಂದಿಗೆ ಸ್ಕೂಟರ್‌ ನಲ್ಲಿ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳಾದ ಗೋಳಿಯಂಗಡಿಯ ಆಸೀಪ್‌ ,ಹಂಝತ್‌ ಖರ್ರೆ, ನೌಷದ್‌ ,ಲತೀಫ್‌ ಎಂಬವರುಗಳು, ಮಹಿಳೆ ಬರುತ್ತಿದ್ದ ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆಗೆ ಹಾಗು ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ.

ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 112/2023 ಕಲಂ 341,323,354,504,506 r/w 34 ಭಾ ದಂ ಸಂ. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya
error: Content is protected !!