September 6, 2026
Uncategorized

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನ.13 ರಂದು(ಇಂದು) ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿಯ ಗಿರೀಶ್.ಎಮ್.ಆರ್ ಎಂಬವರ ಮನೆಯಲ್ಲಿ ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ತಂಡ ಇಂದು ಸಂಜೆ 5 ಗಂಟೆ ಸುಮಾರಿಗೆ ದಾಳಿ ಮಾಡಿದ್ದು ಈ ವೇಳೆ ಆರೋಪಿ ಗಿರೀಶ್.ಎಮ್.ಆರ್ ಮತ್ತು ಬಿಜು ಎಂಬಾತ ಮಾಂಸ ಸಮೇತ ಹಿಡಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಮನೆ ಹಿಂಭಾಗದಲ್ಲಿ ಮಾಂಸ ಮಾಡಲು ಉಪಯೋಹಿಸಿದ ಒಂದು ಬುಟ್ಟಿ , ಗೋಣಿ ಚೀಲಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದು. ಆರೋಪಿಗಳಿಗಾಗಿ ಬಲೆ ಬಿಸಿದ್ದಾರೆ.ಆರೋಪಿ ಗಿರೀಶ್ ಮೇಲೆ 2016 ರಲ್ಲಿ ಕಾಡುಪ್ರಾಣಿ ಬೇಟೆಯಾಡಿ ಬೆಳ್ತಂಗಡಿ ಅರಣ್ಯಾಧಿಕಾರಿಗಳ ಕೈಗೆ ಸಿಕ್ಕಿ ಬಿದ್ದು ಬಂದೂಕು ಜಪ್ತಿಯಾಗಿ ಪ್ರಕರಣ ಕೋರ್ಟ್ ನಲ್ಲಿದೆ.ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ , ಡಿ.ಆರ್.ಎಫ್.ಓ ರವೀಂದ್ರ ಅಂಕಲಾಗಿ,ಡಿ.ಆರ್.ಎಫ್.ಓ ರವೀಂದ್ರ.ಕೆ ,ಡಿ.ಆರ್.ಎಫ್.ಓ ಪೂಜಾ,ಗಸ್ತು ಅರಣ್ಯ ಪಾಲಕ ಅಖಿಲೇಶ್, ಸತೀಶ್, ಪಾಂಡುರಂಗ ಕಮತಿ, ಸಂತೋಷ್.ಬಿ, ವಾಹನ ಚಾಲಕ ಕುಸಲಪ್ಪ ಗೌಡ, ಗೃಹರಕ್ಷಕ ದಳದ ಸಿಬ್ಬಂದಿ ಸೌಮ್ಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!