22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನ.13 ರಂದು(ಇಂದು) ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿಯ ಗಿರೀಶ್.ಎಮ್.ಆರ್ ಎಂಬವರ ಮನೆಯಲ್ಲಿ ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ತಂಡ ಇಂದು ಸಂಜೆ 5 ಗಂಟೆ ಸುಮಾರಿಗೆ ದಾಳಿ ಮಾಡಿದ್ದು ಈ ವೇಳೆ ಆರೋಪಿ ಗಿರೀಶ್.ಎಮ್.ಆರ್ ಮತ್ತು ಬಿಜು ಎಂಬಾತ ಮಾಂಸ ಸಮೇತ ಹಿಡಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಮನೆ ಹಿಂಭಾಗದಲ್ಲಿ ಮಾಂಸ ಮಾಡಲು ಉಪಯೋಹಿಸಿದ ಒಂದು ಬುಟ್ಟಿ , ಗೋಣಿ ಚೀಲಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದು. ಆರೋಪಿಗಳಿಗಾಗಿ ಬಲೆ ಬಿಸಿದ್ದಾರೆ.ಆರೋಪಿ ಗಿರೀಶ್ ಮೇಲೆ 2016 ರಲ್ಲಿ ಕಾಡುಪ್ರಾಣಿ ಬೇಟೆಯಾಡಿ ಬೆಳ್ತಂಗಡಿ ಅರಣ್ಯಾಧಿಕಾರಿಗಳ ಕೈಗೆ ಸಿಕ್ಕಿ ಬಿದ್ದು ಬಂದೂಕು ಜಪ್ತಿಯಾಗಿ ಪ್ರಕರಣ ಕೋರ್ಟ್ ನಲ್ಲಿದೆ.ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ , ಡಿ.ಆರ್.ಎಫ್.ಓ ರವೀಂದ್ರ ಅಂಕಲಾಗಿ,ಡಿ.ಆರ್.ಎಫ್.ಓ ರವೀಂದ್ರ.ಕೆ ,ಡಿ.ಆರ್.ಎಫ್.ಓ ಪೂಜಾ,ಗಸ್ತು ಅರಣ್ಯ ಪಾಲಕ ಅಖಿಲೇಶ್, ಸತೀಶ್, ಪಾಂಡುರಂಗ ಕಮತಿ, ಸಂತೋಷ್.ಬಿ, ವಾಹನ ಚಾಲಕ ಕುಸಲಪ್ಪ ಗೌಡ, ಗೃಹರಕ್ಷಕ ದಳದ ಸಿಬ್ಬಂದಿ ಸೌಮ್ಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!