25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

ಬಳಂಜ: ಜಿಲ್ಲೆಯ ಪ್ರಸಿದ್ದ ಭಜನಾ ತಂಡಗಳೊಂದಾದ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ವತಿಯಿಂದ ದೀಪಾವಳಿ ಆಚರಣೆ ಹಾಗೂ ಭಜನಾ ಪಟುಗಳಿಗೆ ವಿವಿಧ ಪರಿಕರ ವಿತರಣಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ನ.12 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿ ಮಾತನಾಡಿ ಜಿಲ್ಲೆಯಲ್ಲಿಯೇ ಸುಮಾರು 900 ಕ್ಕೂ ಹೆಚ್ಚು ಭಜನಾ ತಂಡಗಳಿದ್ದು ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ತಂಡವು ರಾಜ್ಯದ ನಾನಾ ಕಡೆಗಳಲ್ಲಿ ಕುಣಿತಾ ಭಜನೆ ಮಾಡಿ ಅತ್ಯಂತ ಪ್ರಸಿದ್ದ ಪಡೆದಿದೆ. ಹರೀಶ್ ವೈ ಚಂದ್ರಮರವರ ಸಂಚಾಲಕತ್ವದಲ್ಲಿ ನಡೆಯುವ ತಂಡಕ್ಕೆ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗಳು ದೊರೆಯಲಿ ಎಂದು ಹಾರೈಸಿದರು.

ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್ ಮಾತನಾಡಿ ಭಜನೆಯಿಂದ ಮಕ್ಕಳಲ್ಲಿ ಹಲವಾರು ಬದಲಾವಣೆಯನ್ನು ಕಂಡಿದ್ದೇವೆ, ಉತ್ತಮವಾದ ಸಂಸ್ಕಾರ, ಶಿಸ್ತು ದೊರೆತಾಗ ಸಾರ್ಥಕ ಬದುಕು ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

ಪತ್ರಕರ್ತ ಜಗದೀಶ್ ಬಳಂಜ ಮಾತನಾಡಿ ಬಳಂಜ ಸಾಧಕರನ್ನು ಹೊಂದಿರುವ ಊರು. ಇಲ್ಲಿ ನೂರಾರು ಪ್ರತಿಭೆಗಳಿದ್ದಾರೆ. ಚಿಕ್ಕದಾಗಿ ಪ್ರಾರಂಭಿಸಿದ ಭಜನಾ ತಂಡ ಪ್ರತಿಭೆಯ ಮೂಲಕ ಜಗದಗಳ ಹಬ್ಬಿದೆ ಎಂದರು.

ವೇದಿಕೆಯಲ್ಲಿ ಯುವಶಕ್ತಿ ತಂಡದ ಸದಸ್ಯ ಕರುಣಾಕರ ಹೆಗ್ಡೆ, ಬಳಂಜ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸಹ ಸಂಚಾಲಕ ಪ್ರಣಾಮ್ ಶೆಟ್ಟಿ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಭಜನಾ ಪಟು ಮಾನ್ಯ ಪ್ರಾರ್ಥಿಸಿ, ಸಂಚಾಲಕ ಹರೀಶ್ ವೈ ಚಂದ್ರಮ ಸ್ವಾಗತಿಸಿ,ಅಧ್ಯಕ್ಷೆ ಜ್ಯೋತಿ ವಂದಿಸಿದರು. ಭಜನಾ ತಂಡದ ಎಲ್ಲಾ ಭಜನಾ ಪಟುಗಳು ಸಹಕರಿಸಿದರು.

Related posts

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya
error: Content is protected !!