24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

ಬಳಂಜ: ಜಿಲ್ಲೆಯ ಪ್ರಸಿದ್ದ ಭಜನಾ ತಂಡಗಳೊಂದಾದ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ವತಿಯಿಂದ ದೀಪಾವಳಿ ಆಚರಣೆ ಹಾಗೂ ಭಜನಾ ಪಟುಗಳಿಗೆ ವಿವಿಧ ಪರಿಕರ ವಿತರಣಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ನ.12 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿ ಮಾತನಾಡಿ ಜಿಲ್ಲೆಯಲ್ಲಿಯೇ ಸುಮಾರು 900 ಕ್ಕೂ ಹೆಚ್ಚು ಭಜನಾ ತಂಡಗಳಿದ್ದು ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ತಂಡವು ರಾಜ್ಯದ ನಾನಾ ಕಡೆಗಳಲ್ಲಿ ಕುಣಿತಾ ಭಜನೆ ಮಾಡಿ ಅತ್ಯಂತ ಪ್ರಸಿದ್ದ ಪಡೆದಿದೆ. ಹರೀಶ್ ವೈ ಚಂದ್ರಮರವರ ಸಂಚಾಲಕತ್ವದಲ್ಲಿ ನಡೆಯುವ ತಂಡಕ್ಕೆ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗಳು ದೊರೆಯಲಿ ಎಂದು ಹಾರೈಸಿದರು.

ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್ ಮಾತನಾಡಿ ಭಜನೆಯಿಂದ ಮಕ್ಕಳಲ್ಲಿ ಹಲವಾರು ಬದಲಾವಣೆಯನ್ನು ಕಂಡಿದ್ದೇವೆ, ಉತ್ತಮವಾದ ಸಂಸ್ಕಾರ, ಶಿಸ್ತು ದೊರೆತಾಗ ಸಾರ್ಥಕ ಬದುಕು ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

ಪತ್ರಕರ್ತ ಜಗದೀಶ್ ಬಳಂಜ ಮಾತನಾಡಿ ಬಳಂಜ ಸಾಧಕರನ್ನು ಹೊಂದಿರುವ ಊರು. ಇಲ್ಲಿ ನೂರಾರು ಪ್ರತಿಭೆಗಳಿದ್ದಾರೆ. ಚಿಕ್ಕದಾಗಿ ಪ್ರಾರಂಭಿಸಿದ ಭಜನಾ ತಂಡ ಪ್ರತಿಭೆಯ ಮೂಲಕ ಜಗದಗಳ ಹಬ್ಬಿದೆ ಎಂದರು.

ವೇದಿಕೆಯಲ್ಲಿ ಯುವಶಕ್ತಿ ತಂಡದ ಸದಸ್ಯ ಕರುಣಾಕರ ಹೆಗ್ಡೆ, ಬಳಂಜ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸಹ ಸಂಚಾಲಕ ಪ್ರಣಾಮ್ ಶೆಟ್ಟಿ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಭಜನಾ ಪಟು ಮಾನ್ಯ ಪ್ರಾರ್ಥಿಸಿ, ಸಂಚಾಲಕ ಹರೀಶ್ ವೈ ಚಂದ್ರಮ ಸ್ವಾಗತಿಸಿ,ಅಧ್ಯಕ್ಷೆ ಜ್ಯೋತಿ ವಂದಿಸಿದರು. ಭಜನಾ ತಂಡದ ಎಲ್ಲಾ ಭಜನಾ ಪಟುಗಳು ಸಹಕರಿಸಿದರು.

Related posts

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
error: Content is protected !!