ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಬೆಳ್ತಂಗಡಿ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯ ಅಭಿವೃದ್ದಿಯ ದೃಷಿಯಿಂದ ಅಮೃತ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಶ್ರಮಿಕ ಕಛೇರಿಯಲ್ಲಿ ನ13 ರಂದು ಭೇಟಿ ಮಾಡಲಾಯಿತು.

ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಕಾರ್ಯಕ್ರಮದ ಯಶಸ್ವಿಗಾಗಿ ಶಾಸಕರು ಹಲವಾರು ಮಹತ್ತರವಾದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವದ ಆಚರಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ,ಪ್ರಮುಖರಾದ ವಿನು ಬಳಂಜ, ಮನೋಹರ್ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ವಿಶ್ವನಾಥ ಹೊಳ್ಳ ಮಜ್ಜೇನಿಬೈಲು ,ಸುರೇಶ್ ಶೆಟ್ಟಿ ಕುರೆಲ್ಯ, ರಾಕೇಶ್ ಹೆಗ್ಡೆ ಬಳಂಜ, ಪ್ರವೀಣ್ ಕುಮಾರ್ ಹೆಚ್ ಎಸ್ ನಾಲ್ಕೂರು, ಗುರುಪ್ರಸಾದ್ ಹೆಗ್ಡೆ ದರಿಮಾರ್, ಸಂತೋಷ್ ಪಿ ಕೋಟ್ಯಾನ್ ಬಳಂಜ, ಮಹೇಶ್ ಸುವರ್ಣ ಹಾಕೋಟೆ ಬಳಂಜ ಉಪಸ್ಥಿತರಿದ್ದರು.

Leave a Comment

error: Content is protected !!