25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.10 ಮತ್ತು 11ರಂದು ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ನಡೆಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ದೈಹಿಕ ನಿರ್ದೇಶಕ ಪ್ರಕಾಶ್ ಡಿಸೋಜ ರವರು ಶಾಲಾ ಧ್ವಜಾರೋಹಣಗೈದು ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ನುಡಿದು ಶುಭ ಹಾರೈಸಿದರು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಶಾಲಾ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ನುಡಿದು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ| ಕ್ಲಿಫರ್ಡ್ ಪಿಂಟೋರವರು ಅತಿಥಿ ಪರಿಚಯ ಮಾಡಿದರು. ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ, ಕಬಡ್ಡಿ, ಹಗ್ಗ ಜಗ್ಗಾಟ, ಗುಂಡೆಸೆತ, ಚಕ್ರ ಎಸೆತ, ಎತ್ತರ ಜಿಗಿತ, ಉದ್ದ ಜಿಗಿತ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ವಿದ್ಯಾರ್ಥಿಗಳಾದ ಮೆಲ್ಸ್ಟನ್ ಡಿಸೋಜ ಸ್ವಾಗತಿಸಿ, ಲಹರಿ ವಂದಿಸಿದರು. ಲವಿಶಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶರತ್ ಸಂತೋಷ್ ಪಿಂಟೋ ಕ್ರೀಡಾಕೂಟವನ್ನು ಆಯೋಜಿಸಿದರು. ಕ್ರೈಸ್ಟ್ ಅಕಾಡೆಮಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಮಂತ್ ಬಿ. ಸಿ ಸಹಕರಿಸಿದರು.

Related posts

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!