July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

ಉಜಿರೆ: ಬೆಳೆಯುತ್ತಿರುವ ಉಜಿರೆ ನಗರಕ್ಕೆ ಡಾ| ಸೂರಜ್ ರವರ  ಡೆಂಟಲ್ ಕ್ಲಿನಿಕ್ ಹೊಸ ಮುತ್ತು. ಮನುಷ್ಯನ ಆರೋಗ್ಯದ ಜಾಗೃತಿಯಿಂದ  ವೈದ್ಯರಿಗೆ ಸೇವೆ ಮಾಡುವ ಅವಕಾಶ ದೊರೆತಿದೆ. ದಂತದ ಆರೋಗ್ಯದ ಬಗೆಗೆ ಜನರು ಜಾಗೃತರಾಗಿದ್ದಾರೆ. ಮುಖದ ಅಂದ ಹೆಚ್ಚಿಸಲು ಹಾಗೂ ದಂತದ ಸಂರಕ್ಷಣೆಗೆ  ದಂತ ವೈದ್ಯರ ಸೇವೆ ಅಗತ್ಯವಿದೆ.  ಶೈಕ್ಷಣಿಕ ಕೇಂದ್ರದ ಪರಿಸರದ ಜನರು  ದಂತ ವೈದ್ಯಕೀಯ ಸೇವೆಯ ಪ್ರಯೋಜನ ಪಡೆಯಬೇಕೆಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹೇಳಿದರು.                 

 ಅವರು ನ.12 ರಂದು  ಉಜಿರೆಯ ಪಾರಿಜಾತ  ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ  ಡಾ|ಸೂರಜ್ ಅವರ ಡೆಂಟಲ್ ಕ್ಲಿನಿಕನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು. ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ| ಅಶ್ವಿ ನ್ ಉದ್ಯಾವರ, ಡಾ| ಚಾರುಲತಾ ,ಸೌತಡ್ಕ ದೇವಸ್ಥಾನದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಡಾ| ಪ್ರಕಾಶ್, ಸುಳ್ಯ ಕೆ.ವಿ.ಜಿ. ಕಾಲೇಜಿನ ಡೀನ್ ಡಾ| ಮೋಕ್ಷ ನಾಯಕ್,ನಿಟ್ಟೆ ವಿ.ವಿ.ಯ  ಪರೀಕ್ಷಾ  ಕೇಂದ್ರದ  ಡಾ|ಪ್ರಸಾದ್.,ಪದ್ಮ ಗೌಡ ,ಡಾ| ಗೋಪಾಲಕೃಷ್ಣ,ಡಾ| ಎಂ.ಎಂ . ದಯಾಕರ್ , ಮಂಗಳೂರು ಶ್ರೀನಿವಾಸ್ ಡೆಂಟಲ್ ಕಾಲೇಜಿನ ಡಾ!ಕೃಪಾಲ್  ಮೊದಲಾದವರು ಆಗಮಿಸಿ   ಶುಭ ಕೋರಿದರು.                   

ಧರ್ಮಸ್ಥಳದ   ಗಿರೀಶ್ ಕುದ್ರೆನ್ತಯ, ಧನಂಜಯ ರಾವ್, ಮುಖ್ಯ ಶಿಕ್ಷಕ ಸುರೇಶ ಕೆ, ರವಿಪ್ರಕಾಶ್ ರಾವ್, ವೆಂಕಟೇಶ್, ಮೊದಲಾದವರು ಆಗಮಿಸಿ ನೂತನ ಉದ್ಯಮಕ್ಕೆ ಶುಭ ಹಾರೈಸಿದರು. ಡಾ| ಸೂರಜ್ ಸ್ವಾಗತಿಸಿ,  ಶಿಕ್ಷಕ ರಾಧಾಕೃಷ್ಣ  ಕೆರ್ಮುಣ್ಣಾಯ ನಿರೂಪಿಸಿ, ವಂದಿಸಿದ ಕಾರ್ಯಕ್ರಮದಲ್ಲಿ ಶ್ರೀಶ ಕೆರ್ಮುಣ್ಣಾಯ ಪ್ರಸ್ತಾವಿಸಿದರು.

Related posts

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya
error: Content is protected !!