23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

ಹೊಸಂಗಡಿ: ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇವರ ಆಶ್ರಯದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2023-24 ಕಾರ್ಯಕ್ರಮದಡಿಯಲ್ಲಿ ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಗ್ರಾಮ ಸಮಿತಿ, ಹೊಸಂಗಡಿ ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರ ಸಹಭಾಗಿತ್ವದೊಂದಿಗೆ, ಬಡಕೋಡಿ ಗ್ರಾಮ ಕಾಜೊಟ್ಟು ಶುಭಾನಂದ ಇವರ ಮನೆ ವಠಾರದಲ್ಲಿ ಅಧಿಕ ಇಳುವರಿ ಕೊಡುವ ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಪರಿಚಯ ಕಾರ್ಯಕ್ರಮ ಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿಗಳಾದ ಡಾ. ರಶ್ಮಿ. ಆರ್.ರವರು ಭಾಗವಹಿಸಿ, ಅಧಿಕ ಇಳುವರಿ ಕೊಡುವ ಮೀಟರ್ ಅಲಸಂದೆ ಅರ್ಕ ಮಂಗಲ ತಳಿಯ ಪರಿಚಯ ಹಾಗೂ ಅದರ ಇಳುವರಿ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿಗಳಾದ ಡಾ.ಕೇದಾರನಾಥ ಇವರು ಅಲಸಂಡೆ ಗಿಡಗಳಿಗೆ ರೋಗ ಹರಡುವಿಕೆ, ಕೀಟನಾಶಕಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇದರ ಅಧ್ಯಕ್ಷರಾದ ಶ್ರೀಪತಿ ಉಪಧ್ಯಾಯ ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕರಾದ ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ ( ರಿ) ಮಂಗಳೂರು, ಗ್ರಾಮ ಸಮಿತಿ ಹೊಸಂಗಡಿ ಇದರ ಅಧ್ಯಕ್ಷರಾದ ಹರಿಪ್ರಸಾದ್. ಪಿ. ಇವರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಒಟ್ಟು 25 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 10 ರೈತರಿಗೆ ಅಲಸಂಡೆ ಬೀಜ ಮತ್ತು ಕೃಷಿ ಪರಿಕರಗಳನ್ನು ವಿತರಿಸಲಾಯಿತು.

Related posts

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!