25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದು ಪೂರ್ಣಗೊಂಡಿದೆ.


“ಕೃಷ್ಣ ಬೆಳ್ತಂಗಡಿ” ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದು ಇವರ ಮೂರನೇ ನಿರ್ದೇಶನದ ಸಿನಿಮಾವಾಗಿದೆ.
ರವಿ ಆಚಾರ್ ಹಾಗೂ ಅರಸೀಕೆರೆ ಉಮೇಶ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ.


ಉಳಿದಂತೆ, ಶಂಕರ್ ಭಟ್, ಪೂಜಾ, ಈಶ್ವರ್ ದಲ, ವಾಣಿ ಗೌಡ, ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಶಾಸಕರಾದ ಶಿವಲಿಂಗೇ ಗೌಡರು ಒಂದು ಪ್ರಧಾನ ಪಾತ್ರ ಮಾಡಿದ್ದಾರೆ.
ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬೆಂಗಳೂರಿನಲ್ಲಿ ನಡೆಯುತ್ತಿದೆ ಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

Related posts

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya
error: Content is protected !!