September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದು ಪೂರ್ಣಗೊಂಡಿದೆ.


“ಕೃಷ್ಣ ಬೆಳ್ತಂಗಡಿ” ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದು ಇವರ ಮೂರನೇ ನಿರ್ದೇಶನದ ಸಿನಿಮಾವಾಗಿದೆ.
ರವಿ ಆಚಾರ್ ಹಾಗೂ ಅರಸೀಕೆರೆ ಉಮೇಶ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ.


ಉಳಿದಂತೆ, ಶಂಕರ್ ಭಟ್, ಪೂಜಾ, ಈಶ್ವರ್ ದಲ, ವಾಣಿ ಗೌಡ, ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಶಾಸಕರಾದ ಶಿವಲಿಂಗೇ ಗೌಡರು ಒಂದು ಪ್ರಧಾನ ಪಾತ್ರ ಮಾಡಿದ್ದಾರೆ.
ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬೆಂಗಳೂರಿನಲ್ಲಿ ನಡೆಯುತ್ತಿದೆ ಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

Related posts

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya
error: Content is protected !!