24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದು ಪೂರ್ಣಗೊಂಡಿದೆ.


“ಕೃಷ್ಣ ಬೆಳ್ತಂಗಡಿ” ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದು ಇವರ ಮೂರನೇ ನಿರ್ದೇಶನದ ಸಿನಿಮಾವಾಗಿದೆ.
ರವಿ ಆಚಾರ್ ಹಾಗೂ ಅರಸೀಕೆರೆ ಉಮೇಶ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ.


ಉಳಿದಂತೆ, ಶಂಕರ್ ಭಟ್, ಪೂಜಾ, ಈಶ್ವರ್ ದಲ, ವಾಣಿ ಗೌಡ, ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಶಾಸಕರಾದ ಶಿವಲಿಂಗೇ ಗೌಡರು ಒಂದು ಪ್ರಧಾನ ಪಾತ್ರ ಮಾಡಿದ್ದಾರೆ.
ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬೆಂಗಳೂರಿನಲ್ಲಿ ನಡೆಯುತ್ತಿದೆ ಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

Related posts

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya
error: Content is protected !!