25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದು ಪೂರ್ಣಗೊಂಡಿದೆ.


“ಕೃಷ್ಣ ಬೆಳ್ತಂಗಡಿ” ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದು ಇವರ ಮೂರನೇ ನಿರ್ದೇಶನದ ಸಿನಿಮಾವಾಗಿದೆ.
ರವಿ ಆಚಾರ್ ಹಾಗೂ ಅರಸೀಕೆರೆ ಉಮೇಶ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ.


ಉಳಿದಂತೆ, ಶಂಕರ್ ಭಟ್, ಪೂಜಾ, ಈಶ್ವರ್ ದಲ, ವಾಣಿ ಗೌಡ, ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಶಾಸಕರಾದ ಶಿವಲಿಂಗೇ ಗೌಡರು ಒಂದು ಪ್ರಧಾನ ಪಾತ್ರ ಮಾಡಿದ್ದಾರೆ.
ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬೆಂಗಳೂರಿನಲ್ಲಿ ನಡೆಯುತ್ತಿದೆ ಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

Related posts

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya
error: Content is protected !!