22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದು ಪೂರ್ಣಗೊಂಡಿದೆ.


“ಕೃಷ್ಣ ಬೆಳ್ತಂಗಡಿ” ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದು ಇವರ ಮೂರನೇ ನಿರ್ದೇಶನದ ಸಿನಿಮಾವಾಗಿದೆ.
ರವಿ ಆಚಾರ್ ಹಾಗೂ ಅರಸೀಕೆರೆ ಉಮೇಶ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ.


ಉಳಿದಂತೆ, ಶಂಕರ್ ಭಟ್, ಪೂಜಾ, ಈಶ್ವರ್ ದಲ, ವಾಣಿ ಗೌಡ, ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಶಾಸಕರಾದ ಶಿವಲಿಂಗೇ ಗೌಡರು ಒಂದು ಪ್ರಧಾನ ಪಾತ್ರ ಮಾಡಿದ್ದಾರೆ.
ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬೆಂಗಳೂರಿನಲ್ಲಿ ನಡೆಯುತ್ತಿದೆ ಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

Related posts

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya
error: Content is protected !!