34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

ಹೊಸಂಗಡಿಯಲ್ಲಿ ಕೃಷಿ ಮುಂಚೂಣಿ ಪ್ರಾತ್ಯಕ್ಷಿಕೆ 2023-24 ರ ಅಡಿಯಲ್ಲಿ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಪ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರುಗಳ ಸಹಭಾಗಿತ್ವದಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾಭವನ ನ.7 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ಭಾಗವಹಿಸಿ ಎಲೆ ಚುಕ್ಕೆ ರೋಗದ ಹರಡುವಿಕೆ ಹಾಗೂ ಅದರ ನಿರ್ವಹಣೆ ಕುರಿತು ಮಾಹಿತಿ ನೀಡಿ, ಔಷಧೋಪಚಾರವಾಗಿ (ಪ್ರೋಪಿಕೊನಾಜೊಲ್ 25 % ಇಸಿ 1 ಮಿಲಿ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪಡಣೆ ಮಾಡಬೇಕು ಹಾಗೆ 30 ದಿನಗಳ ನಂತರ ಕಾರ್ಬೆಂಡೇಜಿಮ್+ ಮ್ಯಾಂಕೋಜೆಬ್ 75 ಡಬ್ಲ್ಯೂ ಪಿ @ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪಡಣೆ ಮಾಡಬೇಕು ಎಂಬ) ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿಗಳು ಮಣ್ಣು ಪರೀಕ್ಷೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಹಾಗೂ ಡಾ. ರಶ್ಮಿಆರ್ ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮ ಸಂಯೋಜಕ ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ (ರಿ )ಮಂಗಳೂರು ಇದರ ಹೊಸಂಗಡಿ ಗ್ರಾಮ ಸಮಿತಿ ಅಧ್ಯಕ್ಷ ಹರಿಪ್ರಸಾದ್. ಪಿ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 22 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 10 ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಲಾಯಿತು.

Related posts

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya
error: Content is protected !!