25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

ಹೊಸಂಗಡಿಯಲ್ಲಿ ಕೃಷಿ ಮುಂಚೂಣಿ ಪ್ರಾತ್ಯಕ್ಷಿಕೆ 2023-24 ರ ಅಡಿಯಲ್ಲಿ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಪ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರುಗಳ ಸಹಭಾಗಿತ್ವದಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾಭವನ ನ.7 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ಭಾಗವಹಿಸಿ ಎಲೆ ಚುಕ್ಕೆ ರೋಗದ ಹರಡುವಿಕೆ ಹಾಗೂ ಅದರ ನಿರ್ವಹಣೆ ಕುರಿತು ಮಾಹಿತಿ ನೀಡಿ, ಔಷಧೋಪಚಾರವಾಗಿ (ಪ್ರೋಪಿಕೊನಾಜೊಲ್ 25 % ಇಸಿ 1 ಮಿಲಿ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪಡಣೆ ಮಾಡಬೇಕು ಹಾಗೆ 30 ದಿನಗಳ ನಂತರ ಕಾರ್ಬೆಂಡೇಜಿಮ್+ ಮ್ಯಾಂಕೋಜೆಬ್ 75 ಡಬ್ಲ್ಯೂ ಪಿ @ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪಡಣೆ ಮಾಡಬೇಕು ಎಂಬ) ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿಗಳು ಮಣ್ಣು ಪರೀಕ್ಷೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಹಾಗೂ ಡಾ. ರಶ್ಮಿಆರ್ ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮ ಸಂಯೋಜಕ ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ (ರಿ )ಮಂಗಳೂರು ಇದರ ಹೊಸಂಗಡಿ ಗ್ರಾಮ ಸಮಿತಿ ಅಧ್ಯಕ್ಷ ಹರಿಪ್ರಸಾದ್. ಪಿ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 22 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 10 ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಲಾಯಿತು.

Related posts

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya
error: Content is protected !!