July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

ಹೊಸಂಗಡಿಯಲ್ಲಿ ಕೃಷಿ ಮುಂಚೂಣಿ ಪ್ರಾತ್ಯಕ್ಷಿಕೆ 2023-24 ರ ಅಡಿಯಲ್ಲಿ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಪ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರುಗಳ ಸಹಭಾಗಿತ್ವದಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾಭವನ ನ.7 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ಭಾಗವಹಿಸಿ ಎಲೆ ಚುಕ್ಕೆ ರೋಗದ ಹರಡುವಿಕೆ ಹಾಗೂ ಅದರ ನಿರ್ವಹಣೆ ಕುರಿತು ಮಾಹಿತಿ ನೀಡಿ, ಔಷಧೋಪಚಾರವಾಗಿ (ಪ್ರೋಪಿಕೊನಾಜೊಲ್ 25 % ಇಸಿ 1 ಮಿಲಿ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪಡಣೆ ಮಾಡಬೇಕು ಹಾಗೆ 30 ದಿನಗಳ ನಂತರ ಕಾರ್ಬೆಂಡೇಜಿಮ್+ ಮ್ಯಾಂಕೋಜೆಬ್ 75 ಡಬ್ಲ್ಯೂ ಪಿ @ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪಡಣೆ ಮಾಡಬೇಕು ಎಂಬ) ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿಗಳು ಮಣ್ಣು ಪರೀಕ್ಷೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಹಾಗೂ ಡಾ. ರಶ್ಮಿಆರ್ ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮ ಸಂಯೋಜಕ ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ (ರಿ )ಮಂಗಳೂರು ಇದರ ಹೊಸಂಗಡಿ ಗ್ರಾಮ ಸಮಿತಿ ಅಧ್ಯಕ್ಷ ಹರಿಪ್ರಸಾದ್. ಪಿ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 22 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 10 ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಲಾಯಿತು.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಷಣ್ಮುಖ, ಪ್ರ.ಕಾರ್ಯದರ್ಶಿಯಾಗಿ ಶ್ರೇಯಸ್ ಆಯ್ಕೆ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya
error: Content is protected !!