September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

ಹೊಸಂಗಡಿಯಲ್ಲಿ ಕೃಷಿ ಮುಂಚೂಣಿ ಪ್ರಾತ್ಯಕ್ಷಿಕೆ 2023-24 ರ ಅಡಿಯಲ್ಲಿ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಪ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರುಗಳ ಸಹಭಾಗಿತ್ವದಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾಭವನ ನ.7 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ಭಾಗವಹಿಸಿ ಎಲೆ ಚುಕ್ಕೆ ರೋಗದ ಹರಡುವಿಕೆ ಹಾಗೂ ಅದರ ನಿರ್ವಹಣೆ ಕುರಿತು ಮಾಹಿತಿ ನೀಡಿ, ಔಷಧೋಪಚಾರವಾಗಿ (ಪ್ರೋಪಿಕೊನಾಜೊಲ್ 25 % ಇಸಿ 1 ಮಿಲಿ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪಡಣೆ ಮಾಡಬೇಕು ಹಾಗೆ 30 ದಿನಗಳ ನಂತರ ಕಾರ್ಬೆಂಡೇಜಿಮ್+ ಮ್ಯಾಂಕೋಜೆಬ್ 75 ಡಬ್ಲ್ಯೂ ಪಿ @ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪಡಣೆ ಮಾಡಬೇಕು ಎಂಬ) ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿಗಳು ಮಣ್ಣು ಪರೀಕ್ಷೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಹಾಗೂ ಡಾ. ರಶ್ಮಿಆರ್ ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮ ಸಂಯೋಜಕ ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ (ರಿ )ಮಂಗಳೂರು ಇದರ ಹೊಸಂಗಡಿ ಗ್ರಾಮ ಸಮಿತಿ ಅಧ್ಯಕ್ಷ ಹರಿಪ್ರಸಾದ್. ಪಿ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 22 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 10 ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಲಾಯಿತು.

Related posts

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!