22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನ.12 ರಂದು ನಡೆಯಿತು.

ಘಟಕದ ಅಧ್ಯಕ್ಷ ಅಶ್ವತ್ಥ್ ಕುಮಾರ್ ಮಾತನಾಡಿ, ‘ ದೀಪಾವಳಿ ಪ್ರತಿ ಮನೆಯಲ್ಲೂ ಸಂಭ್ರಮ ಸಂತೋಷವನ್ನು ನೀಡುವ ಹಬ್ಬ. ಪಾರಂಪರಿಕ ಆಚರಣೆಯ ಜೊತೆಗೆ ನಮ್ಮೊಳಗಿನ ಅಜ್ಞಾನ ದೂರವಾಗಿ ಸುಜ್ಞಾನ ಬೆಳಗುವ ಹಬ್ಬವಾಗಲಿ’ ಎಂದು ಶುಭ ಹಾರೈಸಿದರು.

ಘಟಕದ ಗೌರವ ಸಲಹೆಗಾರ ರಮಾನಂದ ಸಾಲಿಯಾನ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಸಲಹೆಗಾರ ವಿಠಲ್ ಸಿ ಪೂಜಾರಿ, ಉಪಾಧ್ಯಕ್ಷ ಸದಾಶಿವ ಊರ, ಕಾರ್ಯದರ್ಶಿ ಹರೀಶ್ ಕನ್ಯಾಡಿ, ಕೋಶಾಧಿಕಾರಿ ವಿಜಯ ಶಿರ್ಲಾಲು, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಹರೀಶ್ ಕನ್ಯಾಡಿ, ಕೊಲ್ಲಿ ಶ್ರೀ ದುರ್ಗಾ ದೇವಿ ಭಜನಾ ಮಂಡಳಿ ಮೇಲ್ವಿಚಾರಕಿ ಪ್ರಮೀಳಾ ಉಮೇಶ್ ಇದ್ದರು.

ಶ್ರೀ ದುರ್ಗಾ ದೇವಿ ಭಜನಾ ಮಂಡಳಿ ಕೊಲ್ಲಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಅನೀಸ್ ಅಮೀನ್ ವೇಣೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!