25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನ.12 ರಂದು ನಡೆಯಿತು.

ಘಟಕದ ಅಧ್ಯಕ್ಷ ಅಶ್ವತ್ಥ್ ಕುಮಾರ್ ಮಾತನಾಡಿ, ‘ ದೀಪಾವಳಿ ಪ್ರತಿ ಮನೆಯಲ್ಲೂ ಸಂಭ್ರಮ ಸಂತೋಷವನ್ನು ನೀಡುವ ಹಬ್ಬ. ಪಾರಂಪರಿಕ ಆಚರಣೆಯ ಜೊತೆಗೆ ನಮ್ಮೊಳಗಿನ ಅಜ್ಞಾನ ದೂರವಾಗಿ ಸುಜ್ಞಾನ ಬೆಳಗುವ ಹಬ್ಬವಾಗಲಿ’ ಎಂದು ಶುಭ ಹಾರೈಸಿದರು.

ಘಟಕದ ಗೌರವ ಸಲಹೆಗಾರ ರಮಾನಂದ ಸಾಲಿಯಾನ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಸಲಹೆಗಾರ ವಿಠಲ್ ಸಿ ಪೂಜಾರಿ, ಉಪಾಧ್ಯಕ್ಷ ಸದಾಶಿವ ಊರ, ಕಾರ್ಯದರ್ಶಿ ಹರೀಶ್ ಕನ್ಯಾಡಿ, ಕೋಶಾಧಿಕಾರಿ ವಿಜಯ ಶಿರ್ಲಾಲು, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಹರೀಶ್ ಕನ್ಯಾಡಿ, ಕೊಲ್ಲಿ ಶ್ರೀ ದುರ್ಗಾ ದೇವಿ ಭಜನಾ ಮಂಡಳಿ ಮೇಲ್ವಿಚಾರಕಿ ಪ್ರಮೀಳಾ ಉಮೇಶ್ ಇದ್ದರು.

ಶ್ರೀ ದುರ್ಗಾ ದೇವಿ ಭಜನಾ ಮಂಡಳಿ ಕೊಲ್ಲಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಅನೀಸ್ ಅಮೀನ್ ವೇಣೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya
error: Content is protected !!