July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ: ಕಳೆದ ನಾಲ್ಕು ವರ್ಷಗಳಿಂದ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬದ ಸಮಾರೋಪ ಸಮಾರಂಭ ನಡೆಯಿತು.ಗೋ ಮಾತೆಗೆ ಪೂಜೆ, ಬಿಜೆಪಿ ಕಮಲದಲ್ಲಿ ಅರಳಿತ ಹಣತೆಗಳ ಚಿತ್ತಾರ, ಬೆಳ್ತಂಗಡಿ ಪೇಟೆಯಲ್ಲಿ ಅತ್ಯಾಕರ್ಷಕ ದೀಪಾಲಂಕಾರ, ವಿವಿಧ ಭಜನಾ ತಂಡಗಳಿಂದ ಕುಣಿತಾ ಭಜನೆ,75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು ಮೆಚ್ಚಗೆ ವ್ಯೆಕ್ತ ಪಡಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ ಎಂದರು.

ದೋಸೆ ಹಬ್ಬದ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ್ ಸಿಂಹ ನಾಯಕ್,ಭಾರತೀಯ ಜನತಾ ಪಾರ್ಟಿಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ, ಭಾರತೀಯ ಜನತಾ ಪಾರ್ಟಿಯ ಕಿಶೋರ್ ಬೊಟ್ಯಾಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ರಾಜ್ಯ ರೈತಮೊರ್ಚಾದ ಉಪಾಧ್ಯಕ್ಷ ರೇಣುಕಾಪ್ರಸಾದ್, ಬಿಜೆಪಿ ಬೆಳ್ತಂಗಡಿ ಯುವಮೋರ್ಚಾದ ಅಧ್ಯಕ್ಷ ಯಶವಂತ್ ಬೆಳಾಲು,ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಯುವಮೊರ್ಚಾ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಮೇಶ್ ಕುಲಾಲ್ ಉಪಸ್ಥಿತರಿದ್ದರು.

ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತರಾಮ್ ಬೆಳಾಲ್, ಅರವಿಂದ ಲಾಯಿಲ ಕಾರ್ಯಕ್ರಮ‌ ನಿರೂಪಿಸಿದರು. ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು.

Related posts

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya
error: Content is protected !!