30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನ.14 ರಂದು ದೀಪಾವಳಿ ಹಬ್ಬದ ಪ್ರಯುಕ್ತ ಕಾಮಧೇನು ಗೋ ಶಾಲೆಯಲ್ಲಿ ಗೋ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾಮಧೇನು ಗೋ ಶಾಲೆಯಲ್ಲಿ ಎಲ್ಲಾ ಗೋವುಗಳನ್ನು ಪೂಜಿಸಿ ಗೋಗ್ರಾಸ ನೀಡಲಾಯಿತು. ಕ್ಷೇತ್ರದ ಅರ್ಚಕರಾದ ಗುರುರಾಜ್ ಇವರು ಗೋ ಪೂಜೆಯನ್ನು ನೆರವೇರಿಸಿದರು.

ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಹಿರಿಯರು, ಮಾರ್ಗದರ್ಶಕರು, ಗೋ ಪ್ರೇಮಿಯೂ ಆದ ವಿಧಾನ ಪರಿಷತ್ ಸದಸ್ಯರಾಗಿರುವ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿ ಗೋ ಪೂಜೆ ಮತ್ತು ಗೋವು ಇದರ ಮಹತ್ವ ದ ಬಗ್ಗೆ ಸಭೆಗೆ ತಿಳಿಸಿದರು.

ವೇದಿಕೆಯಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರು, ಹಿರಿಯರಾದ ಕೃಷ್ಣ ಭಟ್ ಹಿತ್ತಿಲು, ತಾಲೂಕು ಪಶುವೈದ್ಯಾಧಿಕಾರಿಗಳಾದ ಮಂಜಯ್ಯ ನಾಯ್ಕ್, ಕೊಕ್ಕಡ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಪ್ರಭಾಕರಗೌಡ ಮಲ್ಲಿಗೆ ಮಜಲು, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಕೆ ವಿ ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಅತಿಥಿಗಳನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಾಮದೇನು ಗೋ ಶಾಲೆಯಲ್ಲಿ ನಿತ್ಯ ಗೋ ಸೇವೆಯಲ್ಲಿ ತೊಡಗಿರುವ ಕ್ಷೇತ್ರದ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪುರಂದರ ಕಡೀರ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವಿತ್ತರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಪ್ರಶಾಂತ ಪೂವಾಜೆ. ವಿಟ್ಟಲಕುರ್ಲೆ, ಶ್ರೀಮತಿ ಹೇಮಾವತಿ ಶಿವಾನಂದ ಸಂಕೇಶ, ಶ್ರೀಮತಿ ಯಶೋಧ ಉಮೇಶ ಶಬರಾಡಿ,ಹಾಗೂ ಶ್ರೀಮತಿ ಅನುಪಮಾ ಹರೀಶ್ ರಾವ್ ಮುಂಡ್ರುಪಾಡಿ, ಗಣೇಶ್ ಹಿತ್ತಿಲು ಮತ್ತು ಅನೇಕ ಗೋಪ್ರೇಮಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!