23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನ.14 ರಂದು ದೀಪಾವಳಿ ಹಬ್ಬದ ಪ್ರಯುಕ್ತ ಕಾಮಧೇನು ಗೋ ಶಾಲೆಯಲ್ಲಿ ಗೋ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾಮಧೇನು ಗೋ ಶಾಲೆಯಲ್ಲಿ ಎಲ್ಲಾ ಗೋವುಗಳನ್ನು ಪೂಜಿಸಿ ಗೋಗ್ರಾಸ ನೀಡಲಾಯಿತು. ಕ್ಷೇತ್ರದ ಅರ್ಚಕರಾದ ಗುರುರಾಜ್ ಇವರು ಗೋ ಪೂಜೆಯನ್ನು ನೆರವೇರಿಸಿದರು.

ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಹಿರಿಯರು, ಮಾರ್ಗದರ್ಶಕರು, ಗೋ ಪ್ರೇಮಿಯೂ ಆದ ವಿಧಾನ ಪರಿಷತ್ ಸದಸ್ಯರಾಗಿರುವ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿ ಗೋ ಪೂಜೆ ಮತ್ತು ಗೋವು ಇದರ ಮಹತ್ವ ದ ಬಗ್ಗೆ ಸಭೆಗೆ ತಿಳಿಸಿದರು.

ವೇದಿಕೆಯಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರು, ಹಿರಿಯರಾದ ಕೃಷ್ಣ ಭಟ್ ಹಿತ್ತಿಲು, ತಾಲೂಕು ಪಶುವೈದ್ಯಾಧಿಕಾರಿಗಳಾದ ಮಂಜಯ್ಯ ನಾಯ್ಕ್, ಕೊಕ್ಕಡ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಪ್ರಭಾಕರಗೌಡ ಮಲ್ಲಿಗೆ ಮಜಲು, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಕೆ ವಿ ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಅತಿಥಿಗಳನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಾಮದೇನು ಗೋ ಶಾಲೆಯಲ್ಲಿ ನಿತ್ಯ ಗೋ ಸೇವೆಯಲ್ಲಿ ತೊಡಗಿರುವ ಕ್ಷೇತ್ರದ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪುರಂದರ ಕಡೀರ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವಿತ್ತರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಪ್ರಶಾಂತ ಪೂವಾಜೆ. ವಿಟ್ಟಲಕುರ್ಲೆ, ಶ್ರೀಮತಿ ಹೇಮಾವತಿ ಶಿವಾನಂದ ಸಂಕೇಶ, ಶ್ರೀಮತಿ ಯಶೋಧ ಉಮೇಶ ಶಬರಾಡಿ,ಹಾಗೂ ಶ್ರೀಮತಿ ಅನುಪಮಾ ಹರೀಶ್ ರಾವ್ ಮುಂಡ್ರುಪಾಡಿ, ಗಣೇಶ್ ಹಿತ್ತಿಲು ಮತ್ತು ಅನೇಕ ಗೋಪ್ರೇಮಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya
error: Content is protected !!