22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನ.14 ರಂದು ದೀಪಾವಳಿ ಹಬ್ಬದ ಪ್ರಯುಕ್ತ ಕಾಮಧೇನು ಗೋ ಶಾಲೆಯಲ್ಲಿ ಗೋ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾಮಧೇನು ಗೋ ಶಾಲೆಯಲ್ಲಿ ಎಲ್ಲಾ ಗೋವುಗಳನ್ನು ಪೂಜಿಸಿ ಗೋಗ್ರಾಸ ನೀಡಲಾಯಿತು. ಕ್ಷೇತ್ರದ ಅರ್ಚಕರಾದ ಗುರುರಾಜ್ ಇವರು ಗೋ ಪೂಜೆಯನ್ನು ನೆರವೇರಿಸಿದರು.

ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಹಿರಿಯರು, ಮಾರ್ಗದರ್ಶಕರು, ಗೋ ಪ್ರೇಮಿಯೂ ಆದ ವಿಧಾನ ಪರಿಷತ್ ಸದಸ್ಯರಾಗಿರುವ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿ ಗೋ ಪೂಜೆ ಮತ್ತು ಗೋವು ಇದರ ಮಹತ್ವ ದ ಬಗ್ಗೆ ಸಭೆಗೆ ತಿಳಿಸಿದರು.

ವೇದಿಕೆಯಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರು, ಹಿರಿಯರಾದ ಕೃಷ್ಣ ಭಟ್ ಹಿತ್ತಿಲು, ತಾಲೂಕು ಪಶುವೈದ್ಯಾಧಿಕಾರಿಗಳಾದ ಮಂಜಯ್ಯ ನಾಯ್ಕ್, ಕೊಕ್ಕಡ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಪ್ರಭಾಕರಗೌಡ ಮಲ್ಲಿಗೆ ಮಜಲು, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಕೆ ವಿ ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಅತಿಥಿಗಳನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಾಮದೇನು ಗೋ ಶಾಲೆಯಲ್ಲಿ ನಿತ್ಯ ಗೋ ಸೇವೆಯಲ್ಲಿ ತೊಡಗಿರುವ ಕ್ಷೇತ್ರದ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪುರಂದರ ಕಡೀರ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವಿತ್ತರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಪ್ರಶಾಂತ ಪೂವಾಜೆ. ವಿಟ್ಟಲಕುರ್ಲೆ, ಶ್ರೀಮತಿ ಹೇಮಾವತಿ ಶಿವಾನಂದ ಸಂಕೇಶ, ಶ್ರೀಮತಿ ಯಶೋಧ ಉಮೇಶ ಶಬರಾಡಿ,ಹಾಗೂ ಶ್ರೀಮತಿ ಅನುಪಮಾ ಹರೀಶ್ ರಾವ್ ಮುಂಡ್ರುಪಾಡಿ, ಗಣೇಶ್ ಹಿತ್ತಿಲು ಮತ್ತು ಅನೇಕ ಗೋಪ್ರೇಮಿಗಳು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya
error: Content is protected !!