ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ವತಿಯಿಂದ 5ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಮೋನಪ್ಪ ಮೂಲ್ಯ ನಲ್ಲಾರಗುತ್ತು ನಡೆಸಿದರು, ಅಧ್ಯಕ್ಷತೆಯನ್ನು ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಅಧ್ಯಕ್ಷರು ಜಗನ್ನಾಥ್ ಕುಲಾಲ್ ಬೈರೊಟ್ಟು ವಹಿಸಿದರು. ಕೆಸರು ಗದ್ದೆ ಕ್ರೀಡಾಕೂಟದ ಉದ್ಘಾಟಕರು ಸ್ಥಾಪಕ ಅಧ್ಯಕ್ಷರು ತುಳುನಾಡು ಒಕ್ಕೂಟ ಬೆಳ್ತಂಗಡಿಯ ಶೈಲೇಶ್ ಆರ್ ಜೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತುಳು ನಾಡು ಒಕ್ಕೂಟ ದ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಪ್ರಸಾದ್ ಕುಲಾಲ್ ಮತ್ತು ಭಜನಾ ಮಂಡಳಿಯ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು

Leave a Comment

error: Content is protected !!