ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ನಿಡ್ಲೆ: ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.14 ರಂದು ಗಣಹೋಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿ ಶುಭಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಅವಿನಾಶ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ಅಭಿವೃದ್ದಿ, ಮುಂದಕ್ಕೆ ನಡೆಯುವಂತಹ ಕಾರ್ಯಕ್ರಮಗಳು, ಮುಂದಿನ ದಿನಗಳಲ್ಲಿ ಆಗುವಂತಹ ಬೆಳವಣಿಗೆಗಳು ಮತ್ತು ಮುಂದಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಸಾಫ್ಟ್‌ವೇರ್ ಕಂಪೆನಿಯನ್ನು ಪ್ರಾರಂಭಿಸುವ ಇಚ್ಚೆಯನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಲಲಿತ ರಾವ್ ಉಪಸ್ಥಿತರಿದ್ದರು. ಸಹನಿರ್ದೇಶಕರಾದ ಅತಿಶಯ ಜೈನ್ ಸ್ವಾಗತಿಸಿ, ಅಶ್ವತ್ ಶೆಟ್ಟಿ ನಿರೂಪಿಸಿ, ಜಗನ್ನಾಥ್ ಧನ್ಯವಾದವಿತ್ತರು. ನಂತರ ಸಿಬ್ಬಂದಿ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Leave a Comment

error: Content is protected !!