July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮವು ನ.16 ರಂದು ನಡೆಸಲಾಯಿತು.

ಈ ಹಿಂದೆ ಕ್ಷೇತ್ರದಲ್ಲಿ ನಡೆಸಲಾದ ತಾಂಬೂಲ ಪ್ರಶ್ನೆಯಲ್ಲಿ ಈ ಸಾನಿಧ್ಯಗಳಿಗೆ ಗುಡಿ ನಿರ್ಮಾಣ ಮಾಡಿ ಪ್ರತಿಷ್ಠಾಪನೆ ಮಾಡಬೇಕಾಗಿ ಕಂಡುಬಂದಿದ್ದು, ಆ ಪ್ರಕಾರವಾಗಿ ಕ್ಷೇತ್ರಕ್ಕೆ ಸ್ಥಳ ಪರಿಶೀಲನೆಗಾಗಿ ವಾಸ್ತು ತಜ್ಞರಾದ ಜಗನ್ನೀವಾಸ ರಾವ್ ಇವರ ನೇತೃತ್ವದಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಈಶಾನ್ಯ ಭಾಗದಲ್ಲಿರುವ ಕುಡ್ತುಲ್ಲಾಜೆ ಎಂಬಲ್ಲಿ 0.89 ಎಕರೆ ಭೂಮಿಯನ್ನು ದೇವಸ್ಥಾನದ ಹೆಸರಿಗೆ ಕಾಯ್ದಿರಿಸಿದ್ದ ಭೂಮಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸತ್ಯಪ್ರಿಯ ಕಲ್ಲೂರಾಯರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಉಳಿದಂತೆ ಕ್ಷೇತ್ರದ ಅರ್ಚಕರಾದ ಸುಬ್ರಹ್ಮಣ್ಯ ತೊಡ್ತಿಲ್ಲಾಯರು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಹಾಗೂ ಸಮಿತಿಯ ಸದಸ್ಯರು, ಶ್ರೀ ಮಹಾ ಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರು, ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ವಾಸ್ತು ತಜ್ಞರಾದ ಜಗನ್ನಿವಾಸ್ ರಾವ್, ಕಂಟ್ರಾಕ್ಟ್ ದಾರರಾದ ಅವಿನಾಶ್ ಕುಮಾರ್, ಉದ್ಯಮಿ ಬಾಲಕೃಷ್ಣ ನೈಮಿಷ, ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ್ ಮಲ್ಲಿಗೆ ಮಜಲು, ಯಾದವ್ ಆಚಾರ್ಯ, ತಂಬುರಾನ್, ಹಾಗೂ ಶಿಲ್ಪಿ ಪುರಂದರ, ಕ್ಷೇತ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya
error: Content is protected !!