July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟ ಇದರ ಒಕ್ಕೂಟದ ಮಹಾಸಭೆ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯುರು ಇಲ್ಲಿಯ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನ.15 ರಂದು ನಡೆಯಿತು.

ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು (ಬ್ಲಾಕ್ ಮ್ಯಾನೇಜರ್ ),ವಲಯ ಮೇಲ್ವಿಚಾರಕರು, ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಉಪಾಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿಸುದರ ಮೂಲಕ ಮಹಾಸಭೆಯನ್ನು ಪ್ರಾರಂಭಿಸಲಾಯಿತು.

ತಾಲೂಕು ಮ್ಯಾನೇಜರ್ ನಿತೇಶ್ ಒಕ್ಕೂಟದ ನಿಯಮ ನಿಬOಧನೆಗಳು, ಕೃಷಿಯೇತರ ಚಟುವಟಿಕೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ವಲಯ ಮೇಲ್ವಿಚಾರಕರಾದ ಜಯಾನಂದ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮ ಹಾಗೂ ಒಕ್ಕೂಟದ ನಿಯಮ ಹಾಗೂ ಕಾರ್ಯವೈಖರಿ ಬಗ್ಗೆ ತಿಸಿದರು.

KSRLPS ಬೆಳ್ತಂಗಡಿಯ NRLM ನ MIS ಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದಿರುವ ನಿತೇಶ್ ರವರನ್ನು ಸನ್ಮಾನಿಸಲಾಯಿತು. ಹಾಗೂ ಮಾಜಿ ಎಮ್.ಬಿ.ಕೆ ಧರ್ಮವತಿ ಇವರನ್ನು ಸನ್ಮಾನಿಸಲಾಯಿತು. ಬಿಆರ್ ಪಿ ವೀಣಾ ಹಾಜರಿದ್ದರು. ಒಕ್ಕೂಟದ ಹೊಸ ಅಧ್ಯಕ್ಷ , ಕಾರ್ಯದರ್ಶಿ , ಕೋಶಾಧಿಕಾರಿ ಆಯ್ಕೆ ಮಾಡಲಾಯಿತು.

ಸಂಘದ ಸದಸ್ಯೆ ಶ್ರೀಮತಿ ಗೀತಾರವರು ಕಾರ್ಯಕ್ರಮ ನಿರೂಪಿಸಿ, ಒಕ್ಕೂಟದ ಪದಾಧಿಕಾರಿ ಸುನಂದಾರವರು ಸ್ವಾಗತಿಸಿದರು. ಕಾರ್ಯದರ್ಶಿ ರಾಜೀವಿಯವರು ವರದಿ ಮತ್ತು ಎಮ್.ಬಿ.ಕೆ ಶುಭಲಕ್ಷ್ಮಿ ಜಮಾ ಖರ್ಚು ಮಂಡನೆ ಮಾಡಿದರು. ಈ ಸಭೆಯಲ್ಲಿ ಸಂಜೀವಿನಿ ಸಂಘದ ಸದಸ್ಯರು, ಸ್ತ್ರೀ ಶಕ್ತಿ ಸದಸ್ಯರು, ಎಮ್.ಬಿಕೆ, ಎಲ್.ಸಿಆರ್ ಪಿ, ಕೃಷಿ ಸಖಿ, ಪಶು ಸಖಿಯರು ಹಾಜರಿದ್ದರು. ಒಕ್ಕೂಟದ ಪದಾಧಿಕಾರಿ ಪುಷ್ಪಲತಾ ಧನ್ಯವಾದವಿತ್ತರು.

Related posts

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya
error: Content is protected !!