32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಮುಖ್ಯಮಂತ್ರಿ ಆಯಿಷತ್ ಶಿಫಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನೆಹರೂರವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ ಪಂ ಸದಸ್ಯರುಗಳಾದ ಸುಮಂಗಳ ಪ್ರಭು, ಶಾಲಿನಿ, ಅಮೀನಾ, ಎಸ್. ಡಿ. ಎಂ. ಸಿ. ಅಧ್ಯಕ್ಷ ಸಿರಾಜ್ ಚಿಲಿಂಬಿ, ಎಸ್. ಡಿ. ಎಂ. ಸಿ. ಸದಸ್ಯರು, ಸಿ ಆರ್ ಪಿ ರಾಜೇಶ್ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಮದ್ದಡ್ಕ ಎಸ್ ಕೆ ಎಸ್ ಎಸ್ ಎಫ್ ನ ಅಧ್ಯಕ್ಷ ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷ ಮನ್ಸೂರ್ ಪಾದೆ, ಕಾರ್ಯದರ್ಶಿ ನೌಷದ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ನವರು ಬಹುಮಾನ ನೀಡಿ ಗೌರವಿಸಿದರು. ಅಲ್ಲದೆ ತಂದೆ ಅಥವಾ ತಾಯಿ ಇಲ್ಲದ 12 ಮಂದಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ಕಿಟ್ ನೀಡಿ ಪ್ರೋತ್ಸಾಹಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ ಸ್ವಾಗತಿಸಿ, ಶಿಕ್ಷಕಿ ಧವಲಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!