ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಮುಖ್ಯಮಂತ್ರಿ ಆಯಿಷತ್ ಶಿಫಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನೆಹರೂರವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ ಪಂ ಸದಸ್ಯರುಗಳಾದ ಸುಮಂಗಳ ಪ್ರಭು, ಶಾಲಿನಿ, ಅಮೀನಾ, ಎಸ್. ಡಿ. ಎಂ. ಸಿ. ಅಧ್ಯಕ್ಷ ಸಿರಾಜ್ ಚಿಲಿಂಬಿ, ಎಸ್. ಡಿ. ಎಂ. ಸಿ. ಸದಸ್ಯರು, ಸಿ ಆರ್ ಪಿ ರಾಜೇಶ್ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಮದ್ದಡ್ಕ ಎಸ್ ಕೆ ಎಸ್ ಎಸ್ ಎಫ್ ನ ಅಧ್ಯಕ್ಷ ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷ ಮನ್ಸೂರ್ ಪಾದೆ, ಕಾರ್ಯದರ್ಶಿ ನೌಷದ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ನವರು ಬಹುಮಾನ ನೀಡಿ ಗೌರವಿಸಿದರು. ಅಲ್ಲದೆ ತಂದೆ ಅಥವಾ ತಾಯಿ ಇಲ್ಲದ 12 ಮಂದಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ಕಿಟ್ ನೀಡಿ ಪ್ರೋತ್ಸಾಹಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ ಸ್ವಾಗತಿಸಿ, ಶಿಕ್ಷಕಿ ಧವಲಾ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!