23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

ಬೆಳ್ತಂಗಡಿ: ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ದೀಪಾವಳಿ, ಈದ್, ಕ್ರಿಸ್ಮಸ್ ಎಲ್ಲವನ್ನೂ ಆಚರಿಸುತ್ತಾ ಬರುತ್ತಿರುವುದು ಸೌಹಾರ್ದತೆಯ ಮಾದರಿ ಕಾರ್ಯ. ದೀಪಾವಳಿ ಆಚರಣಾ ಕ್ರಮದಲ್ಲಿ ಪ್ರಾದೇಶಿಕವಾಗಿ ಕೆಲವು ವ್ಯತ್ಯಾಸಗಳಿರಬಹುದೇ ಹೊರತು ಸರ್ವಧರ್ಮೀಯರು ಸೇರಿ ಇಡೀ ವಿಶ್ವದಲ್ಲೇ ಆಚರಿಸುವ ವಿಶ್ವ ವಿಖ್ಯಾತ ವಿಶಿಷ್ಟ ಹಬ್ಬ ದೀಪಾವಳಿ ಎಂದು ಪಿಡಿಒ ಪ್ರಕಾಶ ಶೆಟ್ಟಿ ನೊಚ್ಚ ಹೇಳಿದರು.


ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ನ.15 ರಂದು ಹಮ್ಮಿಕೊಂಡಿದ್ದ ಸಾಮೂಹಿಕ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ಸ್ವಾಗತಿಸಿ ಪ್ರಸ್ತಾವನೆಗೈದರು‌.
ಲಯನ್ಸ್ ಕ್ಲಬ್ ಪ್ರಥಮ ಮಹಿಳೆ ಸವಿತಾ ಉಮೇಶ್ ಶೆಟ್ಟಿ ಉದ್ಘಾಟಿಸಿದರು.
ನಿಕಟಪೂರ್ವ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ, ಕಾರ್ಯಕ್ರಮ ಸಂಯೋಜಕ ಸುರೇಶ್ ಶೆಟ್ಟಿ ಲಾಯಿಲ ಶುಭ ಕೋರಿದರು. ಕೋಶಾಧಿಕಾರಿ ಶುಭಾಷಿಣಿ ಉಪಸ್ಥಿತರಿದ್ದರು.
ಧರಣೇಂದ್ರ ಕೆ ಜೈನ್ ವೇದಿಕೆಗೆ ಆಹ್ವಾನಿಸಿದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಾರ್ಥನೆ ಹಾಡಿದರು. ಸುಶೀಲಾ ಹೆಗ್ಡೆ ನೀತಿ ಸಂಹಿತೆ ವಾಚಿಸಿದರು. ಧ್ವಜವಂದನೆಯನ್ನು ನಿತ್ಯಾನಂದ ನಾವರ ನಡೆಸಿದರು. ಲಾಂಗೂಲ ಚಾಲಕ ರಾಮಕೃಷ್ಣ ಗೌಡ ನಗೆ ಚಟಾಕಿ ಹಾರಿಸಿದರು. ಕಾರ್ಯದರ್ಶಿ ಅನಂತಕೃಷ್ಣ ವಂದಿಸಿದರು.

ಉಪಹಾರದ ಪ್ರಾಯೋಜಕ ದಿನೇಶ್ ಉಜಿರೆ ಅವರನ್ನು ಗೌರವಿಸಲಾಯಿತು. ದೀಪಾವಳಿ ಪ್ರಯುಕ್ತ ಸಾಮೂಹಿಕ ಹಣತೆ ಪ್ರದರ್ಶನ, ಸುಡುಮದ್ದು ಪ್ರದರ್ಶನ ನಡೆದವು. ಹಾಸ್ಯ ಭರಿತ ಸ್ಪರ್ಧೆ ನಡೆಸಿ ವಿಜೇತರಾದ ಸುಂದರಿ ನಾಣ್ಯಪ್ಪ ದಂಪತಿಯನ್ನು, ಕಿರಿಯರ ವಿಭಾಗದ ರಿದಿ ಶೆಟ್ಟಿ ಅವರನ್ನು ಬಹುಮಾನ ನೀಡಿ ಪುರಸ್ಕರಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!