31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ , ರಾಷ್ಟ್ರೀಯ ಸೇವಾ ಯೋಜನೆ ಘಟಕ 1&2 , ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಇದರ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಇದರ ಅಂಗವಾಗಿ ಪುಂಜಾಲಕಟ್ಟೆ ಪಿಲಾತಬೆಟ್ಟು ಸಹಕಾರಿ ಸಂಘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರತಿ ವರ್ಷ ಭಾರತದಾದ್ಯಂತ ರಾಷ್ಟ್ರೀಯ ಸಹಕಾರ ಯೂನಿಯನ್, ನವದೆಹಲಿ ಇವರ ಮಾರ್ಗದರ್ಶನದಲ್ಲಿ ನ.14ರಿಂದ 20ರವೆಗೆ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ನಡೆದು ಬಂದಿದೆ. ನವೆಂಬರ್ 14 ಜವಾಹರ್ ಲಾಲ್ ನೆಹರೂ ಅವರ ಹುಟ್ಟು ಹಬ್ಬವಾಗಿದ್ದು, ನೆಹರೂ ಅವರು ಸಹಕಾರ ಚಳುವಳಿಯ ಬೆಳವಣಿಗೆಗೆ ನೀಡಿದ ಪ್ರೋತ್ಸಾಹಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಂಕೇತವಾಗಿ ಅವರ ಹುಟ್ಟು ಹಬ್ಬದಂದು ಸಪ್ತಾಹದ ಉದ್ಘಾಟನೆ ಮಾಡಲಾಯಿತು.

ರಾಷ್ಟ್ರ ರಾಜ್ಯ ಮಟ್ಟದಲ್ಲಿ ಈ ವಿಷಯಗಳ ಕುರಿತು ವಿಚಾರಗೋಷ್ಠಿಗಳು , ಚಿಂತನ ಮಂಥನ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಜನರಲ್ಲಿ ಸಹಕಾರದ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ಈ ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಮಹತ್ವ , ಒದಗಿಸಿ ಕೊಡುವ ಸೌಲಭ್ಯ ಹಾಗು ತತ್ವಗಳ ಕುರಿತಾಗಿ ಧರಣೇಂದ್ರ ಜೈನ್ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.


ಇತರೆ ಶಾಖೆಯ ಅಧ್ಯಕ್ಷರುಗಳಿಗೆ ಹಾಗೂ ಹೈನುಗಾರಿಕೆ ಮತ್ತು ಕೃಷಿಯಲ್ಲಿ ಉತ್ತಮ ಫಲಿತಾಂಶ ಹೊಂದಿದ ಕೃಷಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಿ.ಪಂ ಮಾಜಿ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ಉಪಸ್ಥಿತರಿದ್ದರು. ಸಹಕಾರಿ ಸಂಘದ ಕಾರ್ಯದರ್ಶಿ ಸ್ವಾಗತಿಸಿದರು.

Related posts

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya
error: Content is protected !!