July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ , ರಾಷ್ಟ್ರೀಯ ಸೇವಾ ಯೋಜನೆ ಘಟಕ 1&2 , ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಇದರ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಇದರ ಅಂಗವಾಗಿ ಪುಂಜಾಲಕಟ್ಟೆ ಪಿಲಾತಬೆಟ್ಟು ಸಹಕಾರಿ ಸಂಘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರತಿ ವರ್ಷ ಭಾರತದಾದ್ಯಂತ ರಾಷ್ಟ್ರೀಯ ಸಹಕಾರ ಯೂನಿಯನ್, ನವದೆಹಲಿ ಇವರ ಮಾರ್ಗದರ್ಶನದಲ್ಲಿ ನ.14ರಿಂದ 20ರವೆಗೆ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ನಡೆದು ಬಂದಿದೆ. ನವೆಂಬರ್ 14 ಜವಾಹರ್ ಲಾಲ್ ನೆಹರೂ ಅವರ ಹುಟ್ಟು ಹಬ್ಬವಾಗಿದ್ದು, ನೆಹರೂ ಅವರು ಸಹಕಾರ ಚಳುವಳಿಯ ಬೆಳವಣಿಗೆಗೆ ನೀಡಿದ ಪ್ರೋತ್ಸಾಹಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಂಕೇತವಾಗಿ ಅವರ ಹುಟ್ಟು ಹಬ್ಬದಂದು ಸಪ್ತಾಹದ ಉದ್ಘಾಟನೆ ಮಾಡಲಾಯಿತು.

ರಾಷ್ಟ್ರ ರಾಜ್ಯ ಮಟ್ಟದಲ್ಲಿ ಈ ವಿಷಯಗಳ ಕುರಿತು ವಿಚಾರಗೋಷ್ಠಿಗಳು , ಚಿಂತನ ಮಂಥನ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಜನರಲ್ಲಿ ಸಹಕಾರದ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ಈ ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಮಹತ್ವ , ಒದಗಿಸಿ ಕೊಡುವ ಸೌಲಭ್ಯ ಹಾಗು ತತ್ವಗಳ ಕುರಿತಾಗಿ ಧರಣೇಂದ್ರ ಜೈನ್ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.


ಇತರೆ ಶಾಖೆಯ ಅಧ್ಯಕ್ಷರುಗಳಿಗೆ ಹಾಗೂ ಹೈನುಗಾರಿಕೆ ಮತ್ತು ಕೃಷಿಯಲ್ಲಿ ಉತ್ತಮ ಫಲಿತಾಂಶ ಹೊಂದಿದ ಕೃಷಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಿ.ಪಂ ಮಾಜಿ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ಉಪಸ್ಥಿತರಿದ್ದರು. ಸಹಕಾರಿ ಸಂಘದ ಕಾರ್ಯದರ್ಶಿ ಸ್ವಾಗತಿಸಿದರು.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!